ಎಚ್ ಡಿ ಕೆ ಏನು ನಮ್ಮ ಪಕ್ಷದ ಮಂತ್ರಿನಾ ..? ಭೈರತಿ ಸುರೇಶ್

ಎಚ್ ಡಿ ಕೆ ಏನು ನಮ್ಮ ಪಕ್ಷದ ಮಂತ್ರಿನಾ ..? ಭೈರತಿ ಸುರೇಶ್

ಕೋಲಾರ: ಲೋಕಸಭಾ ಚುನಾವಣೆಯ ಪ್ರಯುಕ್ತ ಇಂದಿನಿಂದ ಕಾಂಗ್ರೆಸ್ನನ ಘಟಾನುಘಟಿಗಳು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರವನ್ನು ಕೈಗೊಂಡಿದ್ದಾರೆ. ಪ್ರಚಾರಕ್ಕು ಮುನ್ನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರ ಶುರು ಮಾಡಿದೆ.

ಇನ್ನು ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೋಲಾರ ಜಿಲ್ಲಾ ಮತ್ತು ಚುನಾವಣಾ ಉಸ್ತುವಾರಿ ಭೈರತಿ ಸುರೇಶ್ ಅವರು, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ, ಜನರಿಗೆ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ ಎಂದರು.

ಲೋಕಸಭಾ ಚುನಾವಣೆಯ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಮಂತ್ರಿನಾ? ಅಥವಾ ಮುಖ್ಯಮಂತ್ರಿನ?  ಅಥವಾ ಉಪಮುಖ್ಯಮಂತ್ರಿನ? ನಮ್ಮ ಪಕ್ಷದ ಗ್ಯಾರಂಟಿಗಳನ್ನು ನಮ್ಮ ಪಕ್ಷದವರು ನಿಲ್ಲಿಸುತ್ತೇವೋ ಬಿಡುತ್ತೇವೋ ಅದು ಅವರಿಗೆ ಬೇಡ.

ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂದು ಮೊದಲು ಅವರು ತಿಳಿದುಕೊಳ್ಳಲಿ ಆಮೇಲೆ ನಮ್ಮ ಪಕ್ಷದ ಗ್ಯಾರಂಟಿಗಳ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

 

 

 

 

 

Related