ಕೇಂದ್ರ ಸಚಿವರ ಮನೆಗೆ ಭೇಟಿ ನೀಡಿದ ಈಶ್ವರಪ್ಪನ ಗುಟ್ಟೇನು?

ಕೇಂದ್ರ ಸಚಿವರ ಮನೆಗೆ ಭೇಟಿ ನೀಡಿದ ಈಶ್ವರಪ್ಪನ ಗುಟ್ಟೇನು?

ಹುಬ್ಬಳ್ಳಿ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನೆಗೆ ಧಿಡೀರ್ ಭೇಟಿ ನೀಡಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿಯವರ ಅವರ ದಿಡೀರ್ ಬೇಟೆಯಿಂದ ರಾಜ ಬಿಜೆಪಿಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಭರ್ಜರಿ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಇನ್ನು ಕಳೆದ ಕೆಲವು ತಿಂಗಳ ಹಿಂದೆ ಮಾಜಿ ಸಚಿವ ಈಶ್ವರಪ್ಪ ಅವರು ರಾಜಕೀಯಕ್ಕೆ ನಿವೃತ್ತಿಯನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ತನ್ನ ಮಗನಿಗೆ ಟಿಕೆಟ್ ನೀಡಬೇಕೆಂದು ಬಹಿರಂಗವಾಗಿ ಹೇಳಿದ್ದರು. ಇದರ ಬೆನ್ನಲ್ಲಿ ಕೇಂದ್ರ ಸಚಿವರ ಮನೆಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಾಗಾದ್ರೆ ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗನಿಗೆ ಟಿಕೆಟ್ ಸಿಗೋದು ಪಕ್ಕ ಅಂದಂತಾಗಿದೆ

ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

 

Related