ಕುಮಾರಣ್ಣನಿಗೆ ಯಾವ ಖಾತೆ ಮೇಲೆ ಕಣ್ಣು..?

ಕುಮಾರಣ್ಣನಿಗೆ ಯಾವ ಖಾತೆ ಮೇಲೆ ಕಣ್ಣು..?

ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಹುಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದು, ಇದೀಗ ಎನ್‌ಡಿಎ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗುತ್ತಿದ್ದು, ಕುಮಾರಸ್ವಾಮಿಯವರಿಗೆ ಕೃಷಿ ಖಾತೆ ಮೇಲೆ ಆಸಕ್ತಿ ಇರುವುದಾಗಿ ಇಂದು ಸ್ವತಃ ಕುಮಾರಸ್ವಾಮಿಯವರೇ ಸುಳಿವು ನೀಡಿದ್ದಾರೆ.

ಹೌದು, ಹೊಸ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಖಾತೆ ವಹಿಸಿಕೊಳ್ಳುವ ಬಗ್ಗೆ ತಮ್ಮ ಪಕ್ಷ ಆಸಕ್ತಿ ಹೊಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ದ ಜನ ಬೇಸತ್ತು ಮೈತ್ರಿ ಬೆಂಬಲಿಸಿದ್ದಾರೆ: ಬೊಮ್ಮಾಯಿ

ನಮ್ಮಲ್ಲಿ ಅಂತಹ ಯಾವುದೇ ಬೇಡಿಕೆ ಇಲ್ಲ. ಬಹುಕಾಲದಿಂದ ಇರುವ ಕರ್ನಾಟಕದ ಸಮಸ್ಯೆಗಳ ಪರಿಹಾರ ನಮ್ಮ ಆದ್ಯತೆಯಾಗಿದೆ. ಪ್ರಾತಿನಿಧ್ಯ ನೀಡುವ ಬಗ್ಗೆ (ಕೇಂದ್ರದಲ್ಲಿ ಕರ್ನಾಟಕಕ್ಕೆ ಕ್ಯಾಬಿನೆಟ್ ಸ್ಥಾನ) ನರೇಂದ್ರ ಮೋದಿ ನಿರ್ಧರಿಸುತ್ತಾರೆ ಎಂದರು.

ತಾವು ಕೃಷಿ ಸಚಿವರಾಗುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇತರ ಹಲವಾರು ಜೆಡಿಎಸ್ ನಾಯಕರು ಇದೇ ರೀತಿಯ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಎನ್ ಡಿಎ ನಾಯಕತ್ವ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳುವ ಮೂಲಕ ಅವರು ತಮ್ಮ ಪಕ್ಷದ ಆಸಕ್ತಿ ಕೃಷಿ ಇಲಾಖೆಯಲ್ಲಿದೆ ಎಂದು ಒಪ್ಪಿಕೊಂಡರು.

 

Related