ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಚದುರಂಗದಾಟ ಶುರು ಮಾಡಿದೆ.
ನಿನ್ನೆ ಜೆಡಿಎಸ್ ನಾಯಕರುಗಳು ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಇಂದು ಕೆ ಎಸ್ ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಗೊತ್ತಿಲ್ಲ ಆ ದೇವರಿಗೂ ಕೂಡಾ ಗೊತ್ತು ಎಂದು ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕರ್ನಾಟಕದಲ್ಲಿ ಎಂಪಿ ಕ್ಯಾಂಡಿಡೇಟ್ ಆಗೋರು ಅದೃಷ್ಟ ಮಾಡಿರುತ್ತಾರೆ ಎಂದು ಹೇಳಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ 28 ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಉತ್ಸಾಹದಿಂದ ಹೇಳಿದ್ದಾರೆ.