ಜಗ್ಗೇಶ್ ಗೆ ಎಚ್ಚರಿಕೆ ನೀಡಿದ್ಯಾಕೆ?

ಜಗ್ಗೇಶ್ ಗೆ ಎಚ್ಚರಿಕೆ ನೀಡಿದ್ಯಾಕೆ?

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಜಗ್ಗೇಶ್ ಅವರು ರಂಗನಾಯಕಿ ಸಿನಿಮಾದ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾದ ವರ್ತೂರ್ ಸಂತೋಷ್ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದರು ಎಂಬ ಕಾರಣಕ್ಕೆ ಕ್ಷತ್ರಿಯ ಸಮುದಾಯದವರು ಈಗ ಜಗ್ಗೇಶ್ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ವರ್ತೂರ್ ಸಂತೋಷ್ ಗೆ ನೀವು ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಕ್ಷತ್ರಿಯ ಸಮುದಾಯದವರೆಲ್ಲರೂ ಸೇರಿಕೊಂಡು ನಿಮ್ಮ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

(ಫೆ. 16) ಶುಕ್ರವಾರ ನಗರದಲ್ಲಿ ರಂಗನಾಯಕಿ ಸಿನಿಮಾದ ಕಾರ್ಯಕ್ರಮದಲ್ಲಿ ಖ್ಯಾತ ನಟ ಜಗ್ಗೇಶ್ ಅವರು ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡಿದ್ದರು. ಈ ವೇಳೆ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ ಬಂಧನಕ್ಕೆ ಒಳಗಾದ ವಿಷಯ ಮಾತನಾಡುತ್ತಾ, ‘ಯಾವನೋ ಕಿತ್ತೋದ್ ನನ್ ಮಗ ರಿಯಲ್ ಹುಲಿ ಉಗುರು ಹಾಕ್ಕೋಂಡ್ ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ’ ಎಂದು ಸಂತೋಷ್ ಹೆಸರು ಹೇಳದೆ ಮಾತನಾಡಿದ್ದರು.

ಈ ಬಗ್ಗೆ ಮಾತನಾಡಿದ್ದ ವರ್ತೂರು ಸಂತೋಷ್, ‘ಅವರು ದೊಡ್ಡವರು, ಎಲ್ಲದಕ್ಕೂ ಉತ್ತರ ಕೊಡಬೇಕಿಲ್ಲ, ನಾವು ಸುಮ್ಮನಿದ್ದರೆ ಅದೇ ಉತ್ತರ, ‘ಕಾಲಾಯ ತಸ್ಮೈ ನಮಃ’ ಎಂದಿದ್ದರು. ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್ ಅವರು ವರ್ತೂರು ಸಂತು ಬಗ್ಗೆ ಕೀಳು ಪದಗಳ ಬಳಕೆ ಮಾಡಿದ ಬಗ್ಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

Related