ಕೆ ಎಸ್ ಈಶ್ವರಪ್ಪ ಮತ್ತೆ ಬಿಜೆಪಿ ಸೇರ್ಕೊಳ್ತಾರಾ..?

ಕೆ ಎಸ್ ಈಶ್ವರಪ್ಪ ಮತ್ತೆ ಬಿಜೆಪಿ ಸೇರ್ಕೊಳ್ತಾರಾ..?

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಸ್ಪರ್ಧಿಸಿ ಹೀನಾಯವಾಗಿ ಸೋಲು ಅನುಭವಿಸಿದ್ದರು.

ಮಾಜಿ ಸಚಿವಕೆ ಎಸ್ ಈಶ್ವರಪ್ಪ ಅವರು ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಪಕ್ಷದ ವಿರುದ್ಧ ಕೆಂಡ ಕಾರುತ್ತಿದ್ದರು ಆದರೆ ಈಗ ಬಿಜೆಪಿ ನನ್ನನ್ನು ಮಾತುಕತೆಗೆ ಕರೆದಿದೆ ಆದರೆ ನಾನು ಹೋಗಿಲ್ಲ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಶುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕರೆದಿದ್ದಾರೆ ಆದರೆ ನನ್ನ ಅಭಿಪ್ರಾಯ ಏನೆಂದು ನಾನು ಇನ್ನು ಸ್ಪಷ್ಟವಾಗಿ ಹೇಳಿಲ್ಲ ಎಂದರು. ಇದನ್ನೂ ಓದಿ: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು: ಸಿ.ಎಂ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧವೇ ತಿರುಗು ಬಿದ್ದಿದ್ದ ಮಾಜಿ ಸಚಿವಕ್ಕೆ ಈಶ್ವರಪ್ಪ ಅವರು ಇದೀಗ ಮತ್ತೆ ಬಿಜೆಪಿ ಪಕ್ಷವನ್ನೇ ಸೇರ್ಕೊಳ್ತಾರೆ ಎಂಬ ಅನುಮಾನ ಶುರುವಾಗಿದೆ.

 

Related