ಲಾಕ್‌ಡೌನ್‌ : ವಾಹನಗಳ ಸಂಚಾರ ನಿರ್ಬಂಧ

ಲಾಕ್‌ಡೌನ್‌ : ವಾಹನಗಳ ಸಂಚಾರ ನಿರ್ಬಂಧ

ಬೆಂಗಳೂರು, ಏ.4: ಪಿಐಎಲ್‌ಗ‌ಳನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ+.

ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗಳಿಗೆ ಸಾಗಿಸಲು ಕಲ್ಪಿಸಲಾಗಿರುವ ವ್ಯವಸ್ಥೆ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶ ನೀಡಿದೆ.

ತೊಂದರೆ ಕೊಡಬೇಡಿ: ಲಾಕ್‌ಡೌನ್‌ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಆದರೆ ಅಗತ್ಯ ವಸ್ತುಗಳ ಖರೀದಿಗೆ ಹೊರಬರುವ ಜನರಿಗೆ ಪೋಲಿಸರು ತೊಂದರೆ ಕೊಡಬಾರದು. ಈ ನಿಟ್ಟಿನಲ್ಲಿ ಎಲ್ಲ ಪೊಲೀಸ್‌ ಠಾಣೆಗಳಿಗೆ ಸುತ್ತೋಲೆ ಹೊರಡಿಸುವಂತೆ ರಾಜ್ಯ ಪೋಲಿಸ್‌ ಮಹಾ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶ ನೀಡಿತು.

Related