ವಿಶ್ವಕಪ್‌; ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಪೊಲೀಸ್ ಭದ್ರತೆ

ವಿಶ್ವಕಪ್‌; ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋಲನ್ನು ಅನುಭವಿಸಿರುವ ಪಾಕಿಸ್ತಾನ್ ಇದೀಗ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ.

ಹೌದು ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಪಂದ್ಯಾವಳಿ ಬೆಂಗಳೂರಿನ  ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದು,  ಸ್ಟೇಡಿಯಂನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ ಮಾಡಲಾಗಿದೆ.

ಉಭಯ ತಂಡಗಳ ಈ ಕದನ ಇದೆ ಅ. 20 ರಂದು ಬೆಂಗಳೂರಿನ ಚಿನ್ನಸ್ವಾಮಿ ನಡೆಯುತ್ತಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಹೀಗಾಗಿ ಪಂದ್ಯಕ್ಕೆ ಸಕಲ ಸಿದ್ದತೆಗಳನ್ನು ಕೆಎಸ್​ಸಿಎ ಮಾಡಿಕೊಂಡಿದೆ. ಇತ್ತ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಹಿಸಿರುವ ಬೆಂಗಳೂರು ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವಕಪ್​ನ ಮೊದಲ ಪಂದ್ಯ ನಡೆಯುತ್ತಿರುವುದರಿಂದಾಗಿ ಇಡೀ ಕ್ರೀಡಾಂಗಣ ಭರ್ತಿಯಾಗುವ ಸಾಧ್ಯತೆ ಇದೆ. ಅಲ್ಲದೆ ಈಗಾಗಲೇ ಮೊದಲ ಪಂದ್ಯದ ಟಿಕೆಟ್​ಗಳು ಸೋಲ್ಡ್ ಔಟ್ ಆಗಿವೆ. ಹೀಗಾಗಿ ಈ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

 

Related