ಯಶ್ ಹುಟ್ಟುಹಬ್ಬ ಸಂಭ್ರಮ; ವಿದ್ಯುತ್ ತಂತಿ ತಗುಲಿ 3 ಜನ ಸಾವು 

ಯಶ್ ಹುಟ್ಟುಹಬ್ಬ ಸಂಭ್ರಮ; ವಿದ್ಯುತ್ ತಂತಿ ತಗುಲಿ 3 ಜನ ಸಾವು 

ಗದಗ: ಇಂದು ರಾಜ್ಯದಾದ್ಯಂತ ರಾಕಿಂಗ್ ಸ್ಟಾರ್ ಯಶ್ ರವರ ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದು, ಯಶ್ ಅವರ ಹುಟ್ಟು ಹಬ್ಬದ ಸಂಭ್ರಮಕ್ಕಾಗಿ ಬ್ಯಾನರ್ ಕಟ್ಟವ ಸಂದರ್ಭದಲ್ಲಿ ಮೂರು ಜನ ಯುವಕರು ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ್ (21) ಮುರಳಿ ನಡವಿನಮನಿ (20) ಮತ್ತು ನವೀನ್ ಗಾಜಿ(19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಬರ್ತ್ ಡೇ ಪ್ಲಾನ್ ಮಾಡಿಕೊಂಡಿದ್ದರು.

ಇನ್ನು ಮಕ್ಕಳನ್ನು ಕಳಕೊಂಡಿರುವ ತಂದೆ ತಾಯಿಗಳ ಆಕ್ರೋಶ ಮುಗಿಲಿ ಮುಟ್ಟಿದೆ.

ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Related