ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಯತ್ನಾಳ್?

ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಯತ್ನಾಳ್?

ಬೆಳಗಾವಿ: ಚಳಿಗಾಲ ಅಧಿವೇಶನ ಪ್ರಾರಂಭವಾಗಿ ಇಂದಿಗೆ ಮೂರು ದಿನ ಕಳೆಯುತ್ತಿದ್ದು, ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ನನ್ನು ಹಿಡಿದು ಹಾಕಲು ವಿಪಕ್ಷ ನಾಯಕರುಗಳ ಸಜ್ಜಾಗಿದ್ದಾರೆ. ಆದರೆ ರಾಜ ಬಿಜೆಪಿಯಲ್ಲಿ ಕೆಲವು ಹಿರಿಯ ನಾಯಕರುಗಳು ಬಿಜೆಪಿ ಪಕ್ಷದ ವಿರುದ್ಧವೇ ಆರೋಪಗಳನ್ನು ಮಾಡುತ್ತಿದ್ದಾರೆ

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷವು ವಿಪಕ್ಷ ನಾಯಕನನ್ನು ಮತ್ತು ಬಿಜೆಪಿಯ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮಾಡಿದ ನಂತರ ರಾಜ ಬಿಜೆಪಿಯಲ್ಲಿ ಹಿರಿಯ ನಾಯಕರು ಬಿಜೆಪಿ ವಿರುದ್ಧ ಗುಡುಗುತ್ತಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷಕ್ಕೆ ವಿಪಕ್ಷದಂತಾಗಿದ್ದಾರೆ. ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಸಹ ಇದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದರು.

ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದರು.

 

Related