ಬೆಳಗಾವಿ: ರಾಜ ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಆರು ತಿಂಗಳ ನಂತರ ವಿಪಕ್ಷ ನಾಯಕ ಮತ್ತು ರಾಜ್ಯ ಅಧ್ಯಕ್ಷರ ನೇಮಕತಿಯನ್ನು ಮಾಡಲಾಗಿದೆ. ಇನ್ನು ರಾಜ್ಯಾಧ್ಯಕ್ಷ ವಿಪಕ್ಷ ನಾಯಕರ ನೇಮಕಾತಿಯನ್ನು ಬಿಜೆಪಿಯ ಹಿರಿಯ ಮುಖಂಡರುಗಳು ಸಹಿಸುತ್ತಿಲ್ಲ ಎಂದು ಕಂಡುಬರುತ್ತಿದೆ.
ಹೌದು ರಾಜ ಬಿಜೆಪಿಯಲ್ಲಿ ಅಸಮಾಧಾನ ಮುಗಿಲೆದ್ದಿದ್ದು ಬಿಜೆಪಿಯ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.
ಇನ್ನು ಯತ್ನಾಳ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಅವರು ಯತ್ನಾಳ್ ಅವರಿಗೆ ಟಂಗ್ ನೀಡಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸೋಲಿಸಲು ಬಿವೈ ವಿಜಯೇಂದ್ರ ಹಣ ಕಳುಹಿಸಿದ್ದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಕುರಿತು ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದಿನಕ್ಕೊಂದು ಹೇಳಿಕೆ ಕೊಡಲು ಆಗಲ್ಲ, ಧನ್ಯವಾದ ಎಂದು ಕೈಮುಗಿದು ಟಾಂಗ್ ನೀಡಿದರು.