ರಾಜ್ಯದ ಯುವ ಜನತೆ ಕಾಂಗ್ರೆಸ್ ಪರ ಇದ್ದಾರೆ: ಶರಣ ಪ್ರಕಾಶ್ ಪಾಟೀಲ್

ರಾಜ್ಯದ ಯುವ ಜನತೆ ಕಾಂಗ್ರೆಸ್ ಪರ ಇದ್ದಾರೆ: ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ: ನಮ್ಮ ಸರ್ಕಾರ ನುಡಿದಂತೆ ನಡೆದಿದೆ ನಾವು ಕೊಟ್ಟ ಮಾತಿನಂತೆ ಈಗಾಗಲೇ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳ ಯೋಜನೆಗಳನ್ನು ಜಾರಿ ಮಾಡಿ ಜನರ ಆಶೀರ್ವಾದವನ್ನು ಪಡೆದುಕೊಂಡಿದ್ದೇವೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದ್ದಾರೆ.

ಇಂದು ಶಿವಮೊಗ್ಗ ನಗರದಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಯುವ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದು ಹೇಳೀದರು.

ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗದಲ್ಲಿ ಇತಿಹಾಸ ನಿರ್ಮಾಣ ಆಗಿದೆ. ಸ್ವಾಮಿ ವಿವೇಕಾನಂದರ ಜನ್ಮದಿನಂದು ಹೋರಾಟದ ನೆಲದಲ್ಲಿ ನಮ್ಮ ಯುವನಿಧಿ ಜಾರಿ ಆಗಿದೆ. ಯುವಕರಿಗೆ ವಿಶ್ವಾಸ ಮೂಡಿಸುವ ಜೊತೆಗೆ ಯುವಕರ ಕೈ ಹಿಡಿಯುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.

 

Related