ಯುವತಿಯರೇ ಎಚ್ಚರ ಸಿನಿಮಾದಲ್ಲಿ ಚಾನ್ಸ್ ನೀಡೋದಾಗಿ ವಂಚನೆ

ಯುವತಿಯರೇ ಎಚ್ಚರ ಸಿನಿಮಾದಲ್ಲಿ ಚಾನ್ಸ್ ನೀಡೋದಾಗಿ ವಂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಸಿನಿಮಾದಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಲು ಅವಕಾಶ ಕೊಡಿಸುತ್ತೇನೆಂದು ಯುವಕ ಯುವತಿಯರಿಂದ ಹಣ ಪಡೆದು ವಂಚಿಸುತ್ತಿರುವ ಘಟನೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿಗೆ ಕಂಡು. ಇಂತಹ ವಂಚನೆ ಘಟನೆ ಮತ್ತೊಂದು ಬೆಳಕಿಗೆ ಬಂದಿದೆ.

ಹೌದು, ಕನ್ನಡ ಚಿತ್ರರಂಗದ ‘ರಂಗಿನ ರಾಟೆ’ ಸಿನಿಮಾದ ನಿರ್ದೇಶಕ ಸಂತೋಷ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಗೂಗಲ್‌ಪೇ, ಫೋನ್​ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ನಿರ್ದೇಶಕ ಸಂತೋಷ್ ಅದನ್ನೇ ನೆಪ ಮಾಡಿಕೊಂಡು ಹಂತ ಹಂತವಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದೆ.

 

Related