ಬೆಳಗಾವಿ : ರಮೇಶ್ ಜಾರಕಿಹೊಳೆ ಬೆಂಬಲಿಗರು ಜಿಲ್ಲೆಯ ಮಾಲದಿನ್ನಿ ಕ್ರಾಸ್ ಬಳಿ ಸಿಡಿ ಬಯಲು ಮಾಡಿದ ದಿನೇಶ್ ಕಲ್ಲಹಳ್ಳಿ ವಿರುದ್ಧ ಪ್ರತಿಭಟನೆ ನಡಸಿದರು.
ಪ್ರತಿಭಟನೆಯಲ್ಲಿ ಜಾರಕಿಹೊಳೆ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಸಿದ್ದಾರೆ. ಕೂಡಲೇ ವಶಕ್ಕೆ ಪಡೆದ ಪೊಲೀಸರು, ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಪ್ರತಿಭಟನೆ ರ್ಯಾಲಿ ಸುಮಾರು 10 ಕಿಲೋ ಮೀಟರ್ ನಡೆಯಲಿದ್ದು, ರ್ಯಾಲಿ ವೇಳೆ ಈ ಘಟನೆ ನಡೆದಿದೆ. ಇನ್ನು ಇತ್ತಾ ಗೋಕಕ್ʼನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬಸ್ ಸಂಚಾರ ಸ್ಥಗಿತವಾಗಿದೆ.
ನಮ್ಮ ನಾಯಕ ರಮೇಶ್ ಜಾರಕಿಹೊಳೆಗೆ ಅನ್ಯಾಯ ಆಗಿದೆ. ಅವರಿಗೆ ನ್ಯಾಯ ಸಿಗುವವರೆಗೆ ನಾವು ಉಗ್ರ ಹೋರಾಟ ನಡೆಸುತ್ತೇವೆ. ಖಾತೆಯನ್ನ ಬೇರೆ ಯಾರಿಗೂ ನೀಡಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ಪ್ರತಿಭಟನಾಕಾರರು ಮಾಡುತ್ತಿದ್ದಾರೆ.