ರಾಜ್ಯದ ಜನತೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ

ರಾಜ್ಯದ ಜನತೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಈಗಾಗಲೇ ಐದು ಗ್ಯಾರಂಟಿಗಳಲ್ಲಿ ಹಲವು ಗ್ಯಾರೆಂಟಿಗಳನ್ನು ಜಾರಿ ಮಾಡಿದೆ. ಇನ್ನು ಗ್ರಹ ಜ್ಯೋತಿ ಯೋಜನೆಯನ್ನು ಆಗಸ್ಟ್ ಒಂದರಿಂದ ಅಂದರೆ ಇಂದಿನಿಂದ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ಬರಲಿದೆ.

ಒಂದು ವರ್ಷದಲ್ಲಿ ಮನೆಯಲ್ಲಿ ಬಳಸಲಾಗಿರುವ ಸರಾಸರಿ ಯೂನಿಟ್‌ ಲೆಕ್ಕ ಮಾಡಿ ಆ ಸರಾಸರಿಯಲ್ಲಿ ಮಾಸಿಕ 200ಕ್ಕಿಂತ ಕಡಿಮೆ ಯೂನಿಟ್‌ ವಿದ್ಯುತ್‌ ಬಳಸಿರುವ ನೋಂದಾಯಿತ ಫಲಾನುಭವಿಗಳಿಗೆ ‘ಗೃಹಜ್ಯೋತಿ’ ಯೋಜನೆ ಪ್ರಯೋಜನ ದೊರೆಯಲಿದೆ. ಆಗಸ್ಟ್‌ನಲ್ಲಿ ಬರುವ ಬಿಲ್‌ನಲ್ಲಿ ಈಗಾಗಲೇ ಹೆಸರು ನೋಂದಾಯಿಸಿಕೊಂಡ ಗ್ರಾಹಕರಿಗೆ ಅವರ ಮನೆಯ ವಿದ್ಯುತ್‌ ಬಿಲ್‌ ಶೂನ್ಯವಾಗಿರಲಿದೆ.

ಇನ್ನು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಜೂ.15 ರಿಂದ ಆರಂಭವಾಗಿದ್ದು, ಜು. 27 ಕಡೆ ದಿನಾಂಕವಾಗಿತ್ತು. ಈ ಅವಧಿಯಲ್ಲಿ ನೋಂದಣಿ ಮಾಡಿಕೊಂಡ ಅರ್ಹ ಫಲಾನುಭವಿಗಳಿಗೆ ಆಗಸ್ಟ್​ ತಿಂಗಳಲ್ಲಿ ಉಚಿತ ವಿದ್ಯುತ್​ ಸಿಗಲಿದೆ. ರಾಜ್ಯಾದ್ಯಂತ 1.40 ಕೋಟಿಗೂ ಹೆಚ್ಚು ಗ್ರಾಹಕರು ಗೃಹ ಜ್ಯೋತಿ ಯೊಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಶೇ 32 ರಷ್ಟು ಜನರು ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿಲ್ಲ. ಜುಲೈ 25 ರ ನಂತರ ಅರ್ಜಿ ಸಲ್ಲಿದ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಉಚಿತ ವಿದ್ಯುತ್ ಬಿಲ್ ಸಿಗಲಿದೆ.

 

Related